23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

ಮುಂಡಾಜೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಊರ ದಾನಿಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ವೈ.ಸಿ.ಭವನದಲ್ಲಿ ಮೇ 31ರಂದು ಜರಗಿತು.


ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಸುಜಿತ್ ಭಿಡೆ ಶೈಕ್ಷಣಿಕ ನಿಧಿ ವಿತರಿಸಿ ಮಾತನಾಡಿ “ದೇಶದ ಪ್ರಗತಿ, ಸಮಾಜವನ್ನು ಮುಂದುವರಿಸಲು ಪ್ರತಿಭೆಗಳು ಅಗತ್ಯ.ಪ್ರತಿ ಉದ್ಯೋಗವು ಉತ್ಕೃಷ್ಟವು ಅಲ್ಲ, ನಿಕೃಷ್ಟವು ಅಲ್ಲ,ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ಪ್ರೀತಿ ಮುಖ್ಯ. ಯಶಸ್ಸಿಗೆ ಹಾದಿ. ಜೀವನದಲ್ಲಿ ಸಂಸ್ಕಾರದ ಜತೆ ಶಿಸ್ತು ಮುಖ್ಯ” ಎಂದರು.


ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಮಾತನಾಡಿ ಶಿಕ್ಷಣ ,ಕ್ರೀಡೆ, ಸಾಂಸ್ಕೃತಿಕ, ಜನಪದ ಕ್ಷೇತ್ರದೊಂದಿಗೆ ನಮ್ಮ ಸಂಸ್ಥೆ ಯುವಜನತೆಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಹಲವಾರು ಎಲೆಮರೆಯ ಕಾಯಿಗಳು ಸಂಸ್ಥೆ ಮೂಲಕ ಬೆಳಕಿಗೆ ಬಂದಿರುವುದು ಹೆಮ್ಮೆಯ ವಿಚಾರ.ವಿದ್ಯಾರ್ಥಿಗಳಿಗೆ ಇಂದು ಸಾಕಷ್ಟುಅವಕಾಶಗಳಿವೆ,ಇವುಗಳನ್ನು ಆಯ್ಕೆ ಮಾಡಿ ಮುಂದುವರಿಯುವುದು ಮುಖ್ಯ” ಎಂದರು.


ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ ಮುಂಬೈ, ಶಮಂತ ಕುಮಾರ್ ಜೈನ್, ಸ್ವಾತಿ ನವೀನ್, ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕಿ ಅಶ್ವಿನಿ ಎ. ಹೆಬ್ಬಾರ್, ಉಪನ್ಯಾಸಕ ಸಚಿನ್ ಹೆಬ್ಬಾರ್,ಶಿಕ್ಷಕಿ ಜತೀಕ್ಷಾ ಮತ್ತಿತರರು ಉಪಸ್ಥಿತರಿದ್ದರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಶಶಿಧರ ಠೋಸರ್ ಸ್ವಾಗತಿಸಿದರು.

Related posts

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!