ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ಉಪವ್ಯವಸ್ಥಾಪಕ ಡಾ. ಸತೀಶ್ ರಾವ್, ಪಡ್ಪು ಹಾಲಿನ ಸೊಸೈಟಿ ಅಧ್ಯಕ್ಷ ಪ್ರವೀಣ್ ವಿ.ಜಿ., ನಡ ಹಾಲಿನ ಸೊಸೈಟಿ ಅಧ್ಯಕ್ಷ ಜನಾರ್ದನ ಗೌಡ, ಮುನಿರಾಜ ಅಜ್ರಿ ಉಪಸ್ಥಿತರಿದ್ದರು. ಕ್ಷೇತ್ರದ ವತಿಯಿಂದ ಪ್ರಸಾದ್ ರವರು ಬರಮಾಡಿಕೊಂಡರು .