32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊAದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-೧೦೦%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್-100%, ಇಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್- 100 %, ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.


ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!