23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

ಮುಂಡಾಜೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಊರ ದಾನಿಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ವೈ.ಸಿ.ಭವನದಲ್ಲಿ ಮೇ 31ರಂದು ಜರಗಿತು.


ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಸುಜಿತ್ ಭಿಡೆ ಶೈಕ್ಷಣಿಕ ನಿಧಿ ವಿತರಿಸಿ ಮಾತನಾಡಿ “ದೇಶದ ಪ್ರಗತಿ, ಸಮಾಜವನ್ನು ಮುಂದುವರಿಸಲು ಪ್ರತಿಭೆಗಳು ಅಗತ್ಯ.ಪ್ರತಿ ಉದ್ಯೋಗವು ಉತ್ಕೃಷ್ಟವು ಅಲ್ಲ, ನಿಕೃಷ್ಟವು ಅಲ್ಲ,ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ಪ್ರೀತಿ ಮುಖ್ಯ. ಯಶಸ್ಸಿಗೆ ಹಾದಿ. ಜೀವನದಲ್ಲಿ ಸಂಸ್ಕಾರದ ಜತೆ ಶಿಸ್ತು ಮುಖ್ಯ” ಎಂದರು.


ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಮಾತನಾಡಿ ಶಿಕ್ಷಣ ,ಕ್ರೀಡೆ, ಸಾಂಸ್ಕೃತಿಕ, ಜನಪದ ಕ್ಷೇತ್ರದೊಂದಿಗೆ ನಮ್ಮ ಸಂಸ್ಥೆ ಯುವಜನತೆಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ. ಹಲವಾರು ಎಲೆಮರೆಯ ಕಾಯಿಗಳು ಸಂಸ್ಥೆ ಮೂಲಕ ಬೆಳಕಿಗೆ ಬಂದಿರುವುದು ಹೆಮ್ಮೆಯ ವಿಚಾರ.ವಿದ್ಯಾರ್ಥಿಗಳಿಗೆ ಇಂದು ಸಾಕಷ್ಟುಅವಕಾಶಗಳಿವೆ,ಇವುಗಳನ್ನು ಆಯ್ಕೆ ಮಾಡಿ ಮುಂದುವರಿಯುವುದು ಮುಖ್ಯ” ಎಂದರು.


ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ ಮುಂಬೈ, ಶಮಂತ ಕುಮಾರ್ ಜೈನ್, ಸ್ವಾತಿ ನವೀನ್, ಮುಂಡಾಜೆ ಸಿಎ ಬ್ಯಾಂಕ್ ನಿರ್ದೇಶಕಿ ಅಶ್ವಿನಿ ಎ. ಹೆಬ್ಬಾರ್, ಉಪನ್ಯಾಸಕ ಸಚಿನ್ ಹೆಬ್ಬಾರ್,ಶಿಕ್ಷಕಿ ಜತೀಕ್ಷಾ ಮತ್ತಿತರರು ಉಪಸ್ಥಿತರಿದ್ದರು.
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯದರ್ಶಿ ಶಶಿಧರ ಠೋಸರ್ ಸ್ವಾಗತಿಸಿದರು.

Related posts

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya
error: Content is protected !!