23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ನಾವೂರು :ಮೇ 31ರಂದು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿ 2024/25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದು ಶಾಲೆಗೆ, ಹೆತ್ತವರಿಗೆ ಮತ್ತು ಊರಿಗೆ ಕೀರ್ತಿ ತಂದವಿದ್ಯಾರ್ಥಿಗಳನ್ನುಅಭಿನಂದಿಸುವ ಕಾರ್ಯಕ್ರಮ ನಡೆಯಿತು


ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭ ಗೊಂಡಿತ್ತು ..ಮುಖ್ಯ ಶಿಕ್ಷಕರು ಶ್ರೀ ರಾಜೇಂದ್ರ ಭಟ್ ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಸಾಧನೆಯ ಹಿಂದೆ ಕೈಜೋಡಿಸಿದ ಸರ್ವರನ್ನು ಅಭಿನಂದಿಸಿ ಮಕ್ಕಳಿಗೆ ಶುಭ ಹಾರೈಸಿದರು

.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದಾ ರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರು ಹಾಗು ನಾವೂರಿನ ವೈದ್ಯರು ಆಗಿರುವ ಶ್ರೀಯುತ ಡಾ. ಪ್ರದೀಪ್ , ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀ ಉಮೇಶ್ ಪ್ರಭು ಹಡೀಲ್, ಗ್ರಾಮಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರೂ ಪ್ರಸ್ತುತ ಸದಸ್ಯರು ಆಗಿರುವ ಶ್ರೀ ಗಣೇಶ್ ಗೌಡ,ಗ್ರಾಮ ಪಂಚಾಯತ್ ಪಿಡಿಒ ಶ್ರೀಮತಿ ಪೂರ್ಣಿಮಾ ,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೇದಾವತಿ, ನಾವೂರು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರೋಹಿಣಿ,ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶ್ರೀ ಇಸ್ಮಾಯಿಲ್,ಗ್ರಾಮ ಪಂಚಾಯತ್ ನಾವೂರು ಇಲ್ಲಿನ ಸದಸ್ಯರು ಶ್ರೀ ಹಸೈನಾರ್,ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇಲ್ಲಿನ ಕಾರ್ಯದರ್ಶಿಗಳು ಶ್ರೀ ಧರ್ಣಪ್ಪ,ಹಿರಿಯ ಪೋಷಕರು ಶ್ರೀ ಧರ್ಣಪ್ಪ ಇವರು ಉಪಸ್ಥಿತರಿದ್ದರು.
ಶಾಲಾ ಹಂತದಲ್ಲಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದ ಭವಿಷ್,ಆಕಾಶ್ ಗೌಡ ಮತ್ತು ಅಕ್ಷಯ್ ಇವರನ್ನು ಗ್ರಾಮ ಪಂಚಾಯತ್ ವತಿಯಿಂದ ನಗದು ಬಹುಮಾನ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.500 ಹೆಚ್ಚು ಅಂಕ ಬಂದ ಮಕ್ಕಳನ್ನು ನಿವೃತ್ತ ಸಮನ್ವಯಾಧಿಕಾರಿ ಶ್ರೀ ಗಣೇಶ್ ಐತಾಳ್ ಅವರು ಮತ್ತು ನಾವೂರಿನ ಸಿಂಚನ ಟ್ರೇಡರ್ಸ್ ನ ಮಾಲಕರು ಶ್ರೀ ನಾರಾಯಣ ಪಿ ಇವರು ನೀಡಿದ ನಗದು ಮೊತ್ತ ಮತ್ತು ಸ್ಮರಣಿಕೆ ನೀಡಗೌರವಿಸಲಾಯಿತು.ಉಳಿದಂತೆ ಎಲ್ಲ ಮಕ್ಕಳನ್ನು ಸ್ಮರಣಿಕೆ ಹಾಗೂ ಹೂ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದ ನಿರ್ವಹಣೆ ಶ್ರೀಮತಿ ಪುಷ್ಪರವರು ನೆರವೇರಿಸಿದರು.ತದನಂತರ ವಿಷಯವಾರು ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ವಿಷಯವಾರು ಶಿಕ್ಷಕರು ನಗದು ಬಹುಮಾನ ನೀಡಿ ಗೌರವಿಸಿದರು. ಶ್ರೀ ಪ್ರದೀಪ್ ಸರ್ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಹಾಗು ಶಿಕ್ಷಕರ ಅವಿರತ ಪ್ರಯತ್ನವನ್ನು ಕೊಂಡಾಡಿ ಶುಭ ಹಾರೈಸಿದರು. ಎಸ್ ಡಿ ಎಂಸಿ ಉಪಾಧ್ಯಕ್ಷರು ಶ್ರೀ ಉಮೇಶ್ ಹಡೀಲ್ ರವರು ಮಕ್ಕಳಿಗೆ ಶುಭ ಹಾರೈಸಿದರು.ನಾವೂರು ಗ್ರಾಮಪಂಚಾಯತ್ ಪಿ ಡಿ ಒ ಶ್ರೀಮತಿ ಪೂರ್ಣಿಮಾ ರವರು ವಿಭಿನ್ನ ಸರ್ಕಾರಿ ಉದ್ಯೋಗಗಳು ಅವುಗಳನ್ನು ಪಡೆಯಲು ಯಾವ ರೀತಿ ಪೂರ್ವತಯಾರಿ ಮಾಡಬೇಕು ಎಂಬ ಅಂಶವನ್ನು ಮಕ್ಕಳಿಗೆ ತಿಳಿಸುತ್ತ ಶುಭ ಹಾರೈಸಿದರು.ಗ್ರಾಮಪಂಚಾಯತ್ ಸದಸ್ಯರು ಶ್ರೀ ಗಣೇಶ್ ಗೌಡ ರವರು ಮಕ್ಕಳ ಸಾಧನೆಯನ್ನು ಕೊಂಡಾಡುತ್ತ ಶಿಕ್ಷಕರ ಶ್ರಮವನ್ನು ಸ್ಮರಿಸಿದರು.ಮಾಜಿ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೇದಾವತಿ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಸುನಂದಾ ರವರು ಶಿಕ್ಷಕರ ಹಾಗೂ ಮಕ್ಕಳ ಶ್ರಮ ಉತ್ತಮ ಫಲಿತಾಂಶ ತರುವಲ್ಲಿ ಯಶಸ್ವಿಯಾಗಿದೆ ಎಂದು ಶುಭ ಹಾರೈಸಿದರು.ಕಾರ್ಯಕ್ರಮವನ್ನು ಶ್ರೀಮತಿ ಮೀನ ಎಂ ನಿರೂಪಿಸಿ , ವಿನೋದರವರು ಸ್ವಾಗತಿಸಿ.ಶ್ರೀಮತಿ ಭವ್ಯ ವಂದನಾರ್ಪಣೆ ಮಾಡಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya
error: Content is protected !!