July 23, 2026
ಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಅನಾನುಕೂಲ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿರುವ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ನಿಷೇಧಿಸುವುದು ಅವಶ್ಯವಾಗಿರುತ್ತದೆ.ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಭದ್ರತಾ ಹಿತದೃಷ್ಟಿಯಿಂದ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೇ.31 ರಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿದ್ದಾರೆ.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya
error: Content is protected !!