25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ಜೂ.1ರಂದು ಲ್ಯಾಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಮ್ಮಾರರ ಸಂಘದ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ ವಹಿಸಿ ಮಾತನಾಡಿದರು.ಉದ್ಘಾಟನೆಯನ್ನು ದ.ಕ.ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಕಡೇಶಿವಾಲಯ ನೆರವೇರಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಶಿವಪ್ರಸಾದ್ ಪುರೋಹಿತರು, ಸವಣಾಲು, ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಕಾರ್ಯದರ್ಶಿ ರಾಮ್‌ಪ್ರಸಾದ್ ಎನ್.ಎಸ್. ಗುಂಪಲಾಜೆ, ಲ್ಯಾಲ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್ ಆಚಾರ್ಯ, ರೋಹಿತ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕಿನ ಕಮ್ಮಾರರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಹರೀಶ್ ಆಚಾರ್ಯ ಸ್ವಾಗತಿಸಿದರು.ರುಕ್ಮಯ ಆಚಾರ್ಯ ಕನ್ನಾಜೆ ವಂದಿಸಿದರು.

Related posts

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!