25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಅನಾನುಕೂಲ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿರುವ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ನಿಷೇಧಿಸುವುದು ಅವಶ್ಯವಾಗಿರುತ್ತದೆ.ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಭದ್ರತಾ ಹಿತದೃಷ್ಟಿಯಿಂದ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೇ.31 ರಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿದ್ದಾರೆ.

Related posts

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya
error: Content is protected !!