23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ಜೂ.1ರಂದು ಲ್ಯಾಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಮ್ಮಾರರ ಸಂಘದ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ ವಹಿಸಿ ಮಾತನಾಡಿದರು.ಉದ್ಘಾಟನೆಯನ್ನು ದ.ಕ.ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಆಚಾರ್ಯ ಕಡೇಶಿವಾಲಯ ನೆರವೇರಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಶಿವಪ್ರಸಾದ್ ಪುರೋಹಿತರು, ಸವಣಾಲು, ಲ್ಯಾಲ ವಿಶ್ವಕರ್ಮಾಭ್ಯುದಯ ಸಭಾದ ಕಾರ್ಯದರ್ಶಿ ರಾಮ್‌ಪ್ರಸಾದ್ ಎನ್.ಎಸ್. ಗುಂಪಲಾಜೆ, ಲ್ಯಾಲ ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್ ಆಚಾರ್ಯ, ರೋಹಿತ್ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕಿನ ಕಮ್ಮಾರರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

ಹರೀಶ್ ಆಚಾರ್ಯ ಸ್ವಾಗತಿಸಿದರು.ರುಕ್ಮಯ ಆಚಾರ್ಯ ಕನ್ನಾಜೆ ವಂದಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya
error: Content is protected !!