July 23, 2026
ಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಅನಾನುಕೂಲ ಪರಿಸ್ಥಿತಿ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿರುವ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂದರ್ಶನವನ್ನು ನಿಷೇಧಿಸುವುದು ಅವಶ್ಯವಾಗಿರುತ್ತದೆ.ಆದುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ಭದ್ರತಾ ಹಿತದೃಷ್ಟಿಯಿಂದ ಪ್ರವಾಸಿಗರ ಸಂದರ್ಶನವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೇ.31 ರಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಆದೇಶ ಹೊರಡಿಸಿದ್ದಾರೆ.

Related posts

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
error: Content is protected !!