July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯು ಜೂ.2ರಂದು ಕಾಲೇಜಿನ ಆಡಿಟೋರಿಯಮ್‌ನಲ್ಲಿ ಜರಗಿತು.

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ. ಫಾ. ಅಬೆಲ್ ಲೋಬೋ ದೀಪ ಬೆಳಗಿಸಿ ಉದ್ಘಾಟಿಸಿ ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತವರಣ ಕಾಲೇಜಿನಲ್ಲಿ ಲಭಿಸುತ್ತದೆ. ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ವಂ.ಫಾ. ವಿಜಯ್ ಲೋಬೋ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಹಾಗು ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ನೈತಿಕ ಹಾಗೂ ಮಾಲ್ಯಾಧರಿತ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣಗೊಳಿಸುತ್ತದೆ ಎಂದು ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿಗೆ ದಾಖಲಾತಿ ಪಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya
error: Content is protected !!