29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!