23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya
error: Content is protected !!