July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ. ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
error: Content is protected !!