July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ೮ರಿಂದ ದ್ವಿತೀಯ ಪಿಯುಸಿ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಜ್ಯೋತ್ಸ್ನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪುಸ್ತಕ ನೀಡಿದಂತಹ ಸಂಸ್ಥೆಗೆ ವಿದ್ಯಾರ್ಥಿಗಳು ಯಾವಾಗಲೂ ಚಿರಋಣಿಗಳಾಗಿರಬೇಕು, ಹದಿಹರೆಯದ ವಿದ್ಯಾರ್ಥಿಗಳು ಸಾಧ್ಯವಾದಷ್ಟು ಆರೋಗ್ಯಕ್ಕೆ ಹಾನಿಕರವಾದ ಕೆಲವು ತಂಪು ಪಾನೀಯ, ಮಧ್ಯಪಾನ, ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಹೊಂದಬೇಕು ಅವುಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ವೈ. ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳನ್ನು ಕಲಿಯುದರ ಜೊತೆ ಜೊತೆಗೆ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಗೌರವಿಸುತ್ತಾ ಪಾಲಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಅನಿಲ್ ಹೆಗ್ಡೆ ಕೇದಗೆವನ, ಕಾರ್ಯದರ್ಶಿ ತನಿಯಪ್ಪ ರಾಣ್ಯ, ಜೊತೆ ಕಾರ್ಯದರ್ಶಿ ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಒಟ್ಟು 110 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ೯೦% ಅಂಕ ಪಡೆದ ೩ ವಿದ್ಯಾರ್ಥಿಗಳಿಗೆ ಜಗನ್ನಾಥ ದೇವಾಡಿಗರವರ ಪ್ರಯೋಜಕತ್ವದಲ್ಲಿ ನಗದು ಬಹುಮಾನದೊಂದಿಗೆ ಅಭಿನಂದಿಸಲಾಯಿತು.

ಕು. ಪ್ರೇಕ್ಷಾ, ಕು. ದಿವ್ಯ, ಕು. ಪ್ರಣಮ್ಯ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ಪ್ರಾಸ್ತಾವಿಸಿ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದರು. ಗೌರವಾಧ್ಯಕ್ಷ ಅನಿಲ್ ಹೆಗ್ಡೆ ವಂದಿಸಿದರು.

Related posts

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya
error: Content is protected !!