29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ನೋಬರ್ಟ್ ಮಾರ್ಟಿಸ್ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಮೇ 31ರಂದು ನಡೆಯಿತು.

ಅಂಡಿಂಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮೋಹನ ಅಂಡಿಂಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರಾಂಶುಪಾಲರ ಉತ್ತಮ ವ್ಯಕ್ತಿತ್ವವನ್ನು, ಕಾಲೇಜಿನಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ ಭಟ್, ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯ ಪ್ರಾಂಶುಪಾಲ ಸನ್ನಿ, ನಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಮುನಿಯಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಜಯಶ್ರೀ, ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯ ಮುಖ್ಯೋಪಾಧ್ಯಾಯ ಮಹಮ್ಮದ್ ರಿಯಾಜ್ ಮತ್ತು ಇತರ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಂಶುಪಾಲರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಊರಿನ ಗಣ್ಯರು, ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಪ್ರಾಂಶುಪಾಲರು ಕಾಲೇಜಿಗೆ ನೀಡಿದ ಸೇವೆಯನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಉಪನ್ಯಾಸಕರಾದ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ವಂದಿಸಿದರು.

Related posts

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!