23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!