24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

ಗುರುವಾಯನಕೆರೆ: ಜಗತ್ತಿನ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ ಹಾಗೂ ಎನ್ ಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ಈ ಹಿಂದೆ ನಡೆದ ಜೆಇಇ ಮೈನ್ಸ್ ಶಿಫ್ಟ್ 1 ಮತ್ತು ಜೆಇಇ ಮೈನ್ ಶಿಫ್ಟ್ 2 ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡು ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ಅಡ್ವಾನ್ಸ್ ಪರೀಕ್ಷೆ ಬರೆಯಲು ಆಯ್ಕೆಯಾಗಿದ್ದರು.

ಜೆಇಇ ಅಡ್ವಾನ್ಸ್ ಪರೀಕ್ಷೆ ಅತ್ಯಂತ ಪ್ರತಿಭಾವಂತರಿಗೆ ಕೂಡಾ ಗಗನ ಕುಸುಮವಾಗಿರುವ ಸಂದರ್ಭದಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗಳು , ರಾಷ್ಟ್ರದ ಬಹಳ ಕಠಿಣ ಪರೀಕ್ಷೆಯೆನಿಸಿಕೊಂಡ ಜೆಇಇ ಅಡ್ವಾನ್ಸ್ ನಲ್ಲಿ ಅತ್ಯುತ್ತಮ ರಾಂಕ್ ಗಳಿಸಿ ಕೊಳ್ಳಲು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅತ್ಯಂತ ಗುಣಮಟ್ಟದ ಕೋಚಿಂಗ್ ಕಾರಣವಾಗಿದೆ.

ವೀರಭದ್ರೇಶ್ ಕಟಗೇರಿ ರಾಷ್ಟ್ರ ಮಟ್ಟದಲ್ಲಿ- 45 ನೆಯ ರಾಂಕ್,ಪ್ರಥಮ್ ಎಸ್- 247 ನೆಯ ರಾಂಕ್,ರೋಹಿತ್ ಮಂಜ- 1125, ಅನುಜ್ ಕೆ ಎಸ್- 3421, ಮೊಹಮ್ಮದ್ ರುವೈದ್ ರುಕ್ಸಾರ್ – 12308 ರಾಂಕ್ ಗಳಿಸಿಕೊಂಡಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಸೀಮಿತ ಸೀಟ್ ಗಳಿರುವ ಐಐಟಿಗಳಿಗೆ ತಮ್ಮ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುವುದಕ್ಕೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಹರ್ಷ ವ್ಯಕ್ತ ಪಡಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!