30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

ಗುರುವಾಯನಕೆರೆ: ಜಗತ್ತಿನ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ ಹಾಗೂ ಎನ್ ಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ಈ ಹಿಂದೆ ನಡೆದ ಜೆಇಇ ಮೈನ್ಸ್ ಶಿಫ್ಟ್ 1 ಮತ್ತು ಜೆಇಇ ಮೈನ್ ಶಿಫ್ಟ್ 2 ರಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡು ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ಅಡ್ವಾನ್ಸ್ ಪರೀಕ್ಷೆ ಬರೆಯಲು ಆಯ್ಕೆಯಾಗಿದ್ದರು.

ಜೆಇಇ ಅಡ್ವಾನ್ಸ್ ಪರೀಕ್ಷೆ ಅತ್ಯಂತ ಪ್ರತಿಭಾವಂತರಿಗೆ ಕೂಡಾ ಗಗನ ಕುಸುಮವಾಗಿರುವ ಸಂದರ್ಭದಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗಳು , ರಾಷ್ಟ್ರದ ಬಹಳ ಕಠಿಣ ಪರೀಕ್ಷೆಯೆನಿಸಿಕೊಂಡ ಜೆಇಇ ಅಡ್ವಾನ್ಸ್ ನಲ್ಲಿ ಅತ್ಯುತ್ತಮ ರಾಂಕ್ ಗಳಿಸಿ ಕೊಳ್ಳಲು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅತ್ಯಂತ ಗುಣಮಟ್ಟದ ಕೋಚಿಂಗ್ ಕಾರಣವಾಗಿದೆ.

ವೀರಭದ್ರೇಶ್ ಕಟಗೇರಿ ರಾಷ್ಟ್ರ ಮಟ್ಟದಲ್ಲಿ- 45 ನೆಯ ರಾಂಕ್,ಪ್ರಥಮ್ ಎಸ್- 247 ನೆಯ ರಾಂಕ್,ರೋಹಿತ್ ಮಂಜ- 1125, ಅನುಜ್ ಕೆ ಎಸ್- 3421, ಮೊಹಮ್ಮದ್ ರುವೈದ್ ರುಕ್ಸಾರ್ – 12308 ರಾಂಕ್ ಗಳಿಸಿಕೊಂಡಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಸೀಮಿತ ಸೀಟ್ ಗಳಿರುವ ಐಐಟಿಗಳಿಗೆ ತಮ್ಮ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುವುದಕ್ಕೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಹರ್ಷ ವ್ಯಕ್ತ ಪಡಿಸಿದ್ದಾರೆ.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya
error: Content is protected !!