July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರರಾದ ವಸಂತ ಭಟ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿ 2025 26ನೇ ಸಾಲಿನ ಶೈಕ್ಷಣಿಕ ವರ್ಷವೂ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶೀರ್ವಾದ ಮಾಡಿದರು.

ನೂತನವಾಗಿ ಸೇರಿದ ಮಕ್ಕಳನ್ನು ಪನ್ನೀರ್ ಹಾಕಿ ಆರತಿ ಮಾಡಿ ಸ್ವಾಗತಿ, ಸ್ಲೇಟು, ಬಳಪ, ಪುಸ್ತಕಗಳನ್ನು ನೀಡಿ ಆತ್ಮೀಯವಾಗಿ ಶಾಲೆಗೆ ಶಿಕ್ಷಕರು ಬರಮಾಡಿಕೊಂಡರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಹಾಗೂ ಪೋಷಕ ಸುರೇಶ್ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕ ಜೋಸೆಫ್ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶ್ರೀಮತಿ ಪೂರ್ಣಿಮಾ ಕೆ.ಎಂ ನಿರೂಪಿಸಿದ ಕಾರ್ಯಕ್ರಮವನ್ನು ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಉಷಾ ವಂದನಾರ್ಪಣೆ ಗೈದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya
error: Content is protected !!