July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ಅಂಗನವಾಡಿಗೆ ಹಿಂಭಾಗದ ಸಂತ ಜೋಸೆಫರ ಅನುದಾನಿತ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಅಂಗನವಾಡಿಯ ಒಂದು ಪಾರ್ಶ್ವದ ಗೋಡೆಗೆ ಭಾಗಶಃ ಹಾನಿಯಾಗಿದೆ.

ಅಂಗನವಾಡಿಯ ಗೋಡೆಯಲ್ಲಿ ಬಿರುಕು ಉಂಟಾಗಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಅಂಗನವಾಡಿಯನ್ನು ಸದ್ಯದ ಮಟ್ಟಿಗೆ ಹತ್ತಿರದ ಶ್ರೀರಾಮ ಭಜನಾ ಮಂದಿರದ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ.

ಅಂಗನವಾಡಿಯ ದಾಖಲೆ ಪುಸ್ತಕಗಳನ್ನು, ಕಪಾಟು, ಅಡುಗೆ ಸರಂಜಾಮುಗಳನ್ನು ಶ್ರೀರಾಮ ಯುವಕ ಸಂಘ ಹಾಗೂ ಭಜನಾ ಮಂದಿರದ ಸದಸ್ಯರ ಸಹಕಾರದಿಂದ ಭಜನಾ ಮಂದಿರದ ಸಭಾ ಭವನಕ್ಕೆ ಸಾಗಿಸಲಾಯಿತು.

ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ರತ್ನಾಕರ್, ಸದಸ್ಯ ಲಕ್ಷ್ಮೀನಾರಾಯಣ ಹೆಗ್ಡೆ ನಿನ್ಯಾಲು ಹಾಗೂ ಅಂಗನವಾಡಿ ಶಿಕ್ಷಕಿಯವರ ಕೋರಿಕೆಗೆ ಶ್ರೀ ರಾಮ ಭಜನಾ ಮಂದಿರದವರು ತಕ್ಷಣ ಸ್ಪಂದನೆ ನೀಡಿದ್ದಾರೆ.

ನೈನಾಡು ಪರಿಸರದಲ್ಲಿ ಬಹಳಷ್ಟು ವರ್ಷಗಳಿಂದ ಅಂಗನವಾಡಿ ಕಾರ್ಯ ನಿರ್ವಹಿಸುತ್ತಿದ್ದು ಸದರಿ ಅಂಗನವಾಡಿಗೆ ನೂತನ ಕಟ್ಟಡವು ಮಂಜೂರಾಗಿದ್ದು ಹತ್ತಿರದ ಶ್ರೀರಾಮ ಯುವಕ ಸಂಘಕ್ಕೆಂದು ಕಾದಿರಿಸಲಾದ ಸ್ಥಳದಲ್ಲಿ ನಿರ್ಮಾಣ ಮಾಡಲಾಗಿದೆ.
ನೂತನ ಕಟ್ಟಡವು ಭಾಗಶಃ ಪೂರ್ಣಗೊಂಡಿದ್ದು, ನೆಲಹಾಸು, ಕಿಟಕಿ ಬಾಗಿಲು, ವಿದ್ಯುತ್ ಸಂಪರ್ಕಗಳು ಇನ್ನಷ್ಟೇ ಆಗಬೇಕಿದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ನೂತನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ತ್ವರಿತವಾಗಿ ಸಾಗುವಂತೆ ಮಾಡಬೇಕೆಂದು ಊರವರ ಒಕ್ಕೊರಲಿನ ಮನವಿ. ಈ ಬಗ್ಗೆ ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಗುತ್ತಿಗೆದಾರರಲ್ಲಿ ಮಾತುಕತೆ ನಡೆದಿದ್ದು ಅನುದಾನದ ಕೊರತೆಯಿದೆ ಎಂಬುದಾಗಿ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಯೋಜನೆಯಡಿಯಲ್ಲಿ ತುರ್ತಾಗಿ ನೂತನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಮುಗಿಸಲು ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸಬೇಕಾಗಿದೆ.

Related posts

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!