29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಜೂ.1ರಂದು ತಾಲೂಕು ನಿವೃತ್ತ ವೈದ್ಯಾಧಿಕಾರಿ ಡಾ| ಕಲಾಮಧು ಕಲ್ಯಾಣಿ ಶೆಟ್ಟಿ ಕಲ್ಮಂಜ ಇವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಡಾ. ಕಲಾಮಧು ಉಪಯುಕ್ತವಾದ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಕಲಾಮಧು ಮತ್ತು ಅವರ ಧರ್ಮಪತ್ನಿ ಶ್ರೀಮತಿ ಕಲ್ಯಾಣಿ ಶೆಟ್ಟಿ ಇವರು ನೀಡಿದ ಆರೋಗ್ಯ ಹಾಗೂ ಸಾಮಾಜಿಕ ಸೇವೆಗಾಗಿ ದಂಪತಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಸನ್ಮಾನಿತ ದಂಪತಿಗಳ ಸೇವೆಯನ್ನು ಸ್ಮರಿಸಿದರು. ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಉಪಾಧ್ಯಕ್ಷ ವಿಜಯಕುಮಾ‌ರ್ ರೈ ಶಾರದಾ ನಗರ, ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಗೌರವ ಸಲಹೆಗಾರರಾದ ಪುಷ್ಪರಾಜ ರೈ ಕಲ್ಲಹಿತ್ತು, ಕೋಶಾಧಿಕಾರಿ ಮಧುಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು.

ಜೊತೆ ಕಾರ್ಯದರ್ಶಿ ನವೀತ್‌ ಶೆಟ್ಟಿ ನಿರೂಪಿಸಿ, ವಂದಿಸಿದರು. ಗ್ರಾಮ ಸಮಿತಿಯ ಬಂಧುಗಳು ಹಾಗೂ ಡಾಕ್ಟರ್ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು.

Related posts

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
error: Content is protected !!