23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಜೂ.1ರಂದು ತಾಲೂಕು ನಿವೃತ್ತ ವೈದ್ಯಾಧಿಕಾರಿ ಡಾ| ಕಲಾಮಧು ಕಲ್ಯಾಣಿ ಶೆಟ್ಟಿ ಕಲ್ಮಂಜ ಇವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಡಾ. ಕಲಾಮಧು ಉಪಯುಕ್ತವಾದ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಕಲಾಮಧು ಮತ್ತು ಅವರ ಧರ್ಮಪತ್ನಿ ಶ್ರೀಮತಿ ಕಲ್ಯಾಣಿ ಶೆಟ್ಟಿ ಇವರು ನೀಡಿದ ಆರೋಗ್ಯ ಹಾಗೂ ಸಾಮಾಜಿಕ ಸೇವೆಗಾಗಿ ದಂಪತಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಸನ್ಮಾನಿತ ದಂಪತಿಗಳ ಸೇವೆಯನ್ನು ಸ್ಮರಿಸಿದರು. ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಉಪಾಧ್ಯಕ್ಷ ವಿಜಯಕುಮಾ‌ರ್ ರೈ ಶಾರದಾ ನಗರ, ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಗೌರವ ಸಲಹೆಗಾರರಾದ ಪುಷ್ಪರಾಜ ರೈ ಕಲ್ಲಹಿತ್ತು, ಕೋಶಾಧಿಕಾರಿ ಮಧುಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ನಾಗಂಡ ಉಪಸ್ಥಿತರಿದ್ದರು.

ಜೊತೆ ಕಾರ್ಯದರ್ಶಿ ನವೀತ್‌ ಶೆಟ್ಟಿ ನಿರೂಪಿಸಿ, ವಂದಿಸಿದರು. ಗ್ರಾಮ ಸಮಿತಿಯ ಬಂಧುಗಳು ಹಾಗೂ ಡಾಕ್ಟರ್ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು.

Related posts

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya
error: Content is protected !!