23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪ್ರತೀ ವರ್ಷ ಉಚಿತವಾಗಿ ನೀಡುವ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ ಜೂ.1ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಪೌರ ಸನ್ಮಾನ ಸಮಿತಿಯ ಅಧ್ಯಕ್ಷ ಎಂ. ಗಂಗಾಧರ ಮಿತ್ತಮಾರು, ಶಿವಪ್ರಸಾದ್ ಅಜಿಲರು ಉಪಸ್ಥಿತರಿದ್ದು ಮಾಹಿತಿ ಹಂಚಿಕೊಂಡರು.

ಸಭೆಯಲ್ಲಿ ಹಿರಿಯರಾದ ಸೋಮನಾಥ ಮಯ್ಯ, ಭರತೇಶ್ ವಿ, ಡಾ. ಎನ್.ಎಂ. ತುಳುಪುಳೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ರಾಜಶೇಖರ ಶೆಟ್ಟಿ, ನ್ಯಾಯವಾದಿ ಅಜಿತ್ ಕುಮಾರ್ ನಾವರ, ಸದಾನಂದ ಪೂಜಾರಿ ಉಂಗಿಲಬೈಲ್, ಸುಪ್ರೀತ್ ಜೈನ್, ರತ್ನರಾಜ ಜೈನ್ ಪಿಲ್ಯ, ಮೋಹನ್ ಎ. ದಾಸ್ ಅಳದಂಗಡಿ, ಗ್ರಾ.ಪಂ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಸಂತೋಷ್ ಹೆಗ್ಡೆ ಕಟ್ಟೆ, ಶಿಕ್ಷಕರಾದ ನಾಗಭೂಷಣ್, ಶಿಕ್ಷಕಿ ಮಂಗಳ, ಬಡಗಕಾರಂದೂರು ಶಾಲೆ ಮುಖ್ಯೋಪಾಧ್ಯಾಯರಾದ ಸುರೇಶ್, ಹರಿಣಾಕ್ಷಿ ಕೆ. ಶೆಟ್ಟಿ, ಶ್ರೀರಂಗ ಮಯ್ಯ, ಜಗನ್ನಾಥ ಶೆಟ್ಟಿ, ಗಣೇಶ್ ದೇವಾಡಿಗ, ಧರ್ಣಪ್ಪ ದೋರಿಂಜೆ, ಯಶೋಧರ ಬಿಕ್ಕಿರ, ಸದಾನಂದ ಬಿ.ಕುದ್ಯಾಡಿ, ಕೊರಗಪ್ಪ ಕುಡ್ದಲಬೆಟ್ಟು, ಜಗದೀಶ್ ರೈ, ಹರೀಶ್ ಕುಲಾಲ್ ಕೆದ್ದು, ಸಂತೋಷ್ ಕಟ್ಟೆ, ಮುಂತಾದ ಪ್ರಮುಖರು ಭಾಗವಹಿಸಿದ್ದರು.

ಸಮಾರಂಭ ಜೂನ್14 ರಂದು ಶನಿವಾರ ನಡೆಯುವುದಾಗಿ ಪ್ರಕಟಪಡಿಸಲಾಯಿತು.

ಪೌರ ಸನ್ಮಾನ ಸಮಿತಿ ಕಾರ್ಯದರ್ಶಿ ಪಿ.ಹೆಚ್.ನಿತ್ಯಾನಂದ ಶೆಟ್ಟಿ ಸ್ವಾಗತಿಸಿದರು.ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya
error: Content is protected !!