23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya
error: Content is protected !!