July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲದಲ್ಲಿ ಜೂ.2ರಂದು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಯಶೋಧರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ , ಕೋಶಾಧಿಕಾರಿ ಸದಾಶಿವ ಕಕ್ಕೇನ, ಉಪಾಧ್ಯಕ್ಷ ಮುಷ್ತಾಕ್ ಕಾಶಿಬೆಟ್ಟು, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯಾ ಭಾಗವಹಿಸಿದರು.

35,000 ಮೌಲ್ಯದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ ಎಂ. ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಉಷಾ ಧನ್ಯವಾದಗೈದರು. ಸಹ ಶಿಕ್ಷಕರ ಕೃಷ್ಣ ಕುಮಾರ್ ನಿರೂಪಿಸಿದರು.

ಸಹ ಶಿಕ್ಷಕಿಯರಾದ ಶ್ರೀಮತಿ ಗಂಗಾರಾಣಿ ನಾ ಜೋಷಿ, ಶ್ರೀಮತಿ ತ್ರಿಶಾಲ, ಶ್ರೀಮತಿ ಲೀನಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!