23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲದಲ್ಲಿ ಜೂ.2ರಂದು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಯಶೋಧರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ , ಕೋಶಾಧಿಕಾರಿ ಸದಾಶಿವ ಕಕ್ಕೇನ, ಉಪಾಧ್ಯಕ್ಷ ಮುಷ್ತಾಕ್ ಕಾಶಿಬೆಟ್ಟು, ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯಾ ಭಾಗವಹಿಸಿದರು.

35,000 ಮೌಲ್ಯದ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ ಎಂ. ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಉಷಾ ಧನ್ಯವಾದಗೈದರು. ಸಹ ಶಿಕ್ಷಕರ ಕೃಷ್ಣ ಕುಮಾರ್ ನಿರೂಪಿಸಿದರು.

ಸಹ ಶಿಕ್ಷಕಿಯರಾದ ಶ್ರೀಮತಿ ಗಂಗಾರಾಣಿ ನಾ ಜೋಷಿ, ಶ್ರೀಮತಿ ತ್ರಿಶಾಲ, ಶ್ರೀಮತಿ ಲೀನಾ ಡಿಸೋಜಾ ಕಾರ್ಯಕ್ರಮಕ್ಕೆ ಸಹಕರಿಸಿದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಶಾಲಾ ಹಳೆ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆ ನೂತನ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!