24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ೮ರಿಂದ ದ್ವಿತೀಯ ಪಿಯುಸಿ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ವಿಭಾಗದ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಜ್ಯೋತ್ಸ್ನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪುಸ್ತಕ ನೀಡಿದಂತಹ ಸಂಸ್ಥೆಗೆ ವಿದ್ಯಾರ್ಥಿಗಳು ಯಾವಾಗಲೂ ಚಿರಋಣಿಗಳಾಗಿರಬೇಕು, ಹದಿಹರೆಯದ ವಿದ್ಯಾರ್ಥಿಗಳು ಸಾಧ್ಯವಾದಷ್ಟು ಆರೋಗ್ಯಕ್ಕೆ ಹಾನಿಕರವಾದ ಕೆಲವು ತಂಪು ಪಾನೀಯ, ಮಧ್ಯಪಾನ, ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಹೊಂದಬೇಕು ಅವುಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ವೈ. ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳನ್ನು ಕಲಿಯುದರ ಜೊತೆ ಜೊತೆಗೆ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡು ದೇಶದ ಸಂಸ್ಕೃತಿ ಆಚಾರ ವಿಚಾರಗಳನ್ನು ಗೌರವಿಸುತ್ತಾ ಪಾಲಿಸಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಅನಿಲ್ ಹೆಗ್ಡೆ ಕೇದಗೆವನ, ಕಾರ್ಯದರ್ಶಿ ತನಿಯಪ್ಪ ರಾಣ್ಯ, ಜೊತೆ ಕಾರ್ಯದರ್ಶಿ ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಒಟ್ಟು 110 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ೯೦% ಅಂಕ ಪಡೆದ ೩ ವಿದ್ಯಾರ್ಥಿಗಳಿಗೆ ಜಗನ್ನಾಥ ದೇವಾಡಿಗರವರ ಪ್ರಯೋಜಕತ್ವದಲ್ಲಿ ನಗದು ಬಹುಮಾನದೊಂದಿಗೆ ಅಭಿನಂದಿಸಲಾಯಿತು.

ಕು. ಪ್ರೇಕ್ಷಾ, ಕು. ದಿವ್ಯ, ಕು. ಪ್ರಣಮ್ಯ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ಪ್ರಾಸ್ತಾವಿಸಿ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದರು. ಗೌರವಾಧ್ಯಕ್ಷ ಅನಿಲ್ ಹೆಗ್ಡೆ ವಂದಿಸಿದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya
error: Content is protected !!