September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya
error: Content is protected !!