September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!