23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

ಕೊಯ್ಯೂರು: ಆದೂರುಪೆರಾಲ್ ಶ್ರೀಕೃಷ್ಣ ಭಜನಾ ಮಂಡಳಿಯ ಸದಸ್ಯರು ಇತ್ತೀಚೆಗೆ ಪಾಂಬೇಲು ದೇವರಾಜ ಗೌಡರ ನೂತನ ಮನೆಯ ವಾಸ್ತು ಪೂಜೆಯ ಸಂದರ್ಭದಲ್ಲಿ ಭಜನಾ ಸೇವೆಯನ್ನು ನಡೆಸಿದರು.

ಭಜನಾ ಮಂಡಳಿಯ ಪದಾಧಿಕಾರಿಗಳ ಹಾಗೂ ಸದಸ್ಯರುಗಳ ಒಗ್ಗಟ್ಟು ಹಾಗೂ ವಹಿಸಿಕೊಂಡಂತಹ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ರೀತಿಗೆ ದೇವರಾಜ ಗೌಡ ಹಾಗೂ ಅವರ ಮನೆಯವರು ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಸುಮಾರು ರೂ.24 ಸಾವಿರ ವೆಚ್ಚದ ಇನ್ವರ್ಟರ್ ಕೊಡುಗೆಯಾಗಿ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಪಾಂಬೇಲು ದೇವರಾಜ ಗೌಡರ ಮಗ ಡಾಕ್ಟರ್ ಕಾರ್ತಿಕ್ ಅವರ ಪತ್ನಿ ಶ್ರೀಮತಿ ನಿರೀಕ್ಷಾ, ಕಾರ್ತಿಕ್ ರವರ ಮಗ ವಿಹಾನ್‌ಕೃಷ್ಣ, ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್. ಭಜನಾ ಮಂದಿರದ ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್, ಲೆಕ್ಕಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರುಬೊಟ್ಟು, ಭಜನಾ ಮಂಡಳಿಯ ಅರ್ಚಕ ಹೇಮಂತ ಗೌಡ ನಾಗನೊಡಿ, ಮಾಜಿ ಕಾರ್ಯದರ್ಶಿ ಮನೋಜ್ ಕುಮಾರ್ ಕಜೆ, ಮಾಜಿ ಜೊತೆ ಕಾರ್ಯದರ್ಶಿ ಜಿತೇಶ್ ಸಾಂತ್ಯೂಡಿ ಹಾಗೂ ವಸಂತ ನೇಕಾರ ಮುಂಡೆವು, ರಿತೇಶ್ ಬಜ, ಜನಾರ್ದನ ಉಮಿಯ, ಲತೀಶ ಆದೂರು ಪೇರಾಲ್, ನಿತಿನ್ ದೆಲೋಡಿ, ಕಮಲೇಶ್ ಸುರುಳಿ ಮತ್ತು ಭಜನಾ ಮಂಡಳಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya
error: Content is protected !!