September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ಅಂಗನವಾಡಿಗೆ ಹಿಂಭಾಗದ ಸಂತ ಜೋಸೆಫರ ಅನುದಾನಿತ ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಅಂಗನವಾಡಿಯ ಒಂದು ಪಾರ್ಶ್ವದ ಗೋಡೆಗೆ ಭಾಗಶಃ ಹಾನಿಯಾಗಿದೆ.

ಅಂಗನವಾಡಿಯ ಗೋಡೆಯಲ್ಲಿ ಬಿರುಕು ಉಂಟಾಗಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಅಂಗನವಾಡಿಯನ್ನು ಸದ್ಯದ ಮಟ್ಟಿಗೆ ಹತ್ತಿರದ ಶ್ರೀರಾಮ ಭಜನಾ ಮಂದಿರದ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ.

ಅಂಗನವಾಡಿಯ ದಾಖಲೆ ಪುಸ್ತಕಗಳನ್ನು, ಕಪಾಟು, ಅಡುಗೆ ಸರಂಜಾಮುಗಳನ್ನು ಶ್ರೀರಾಮ ಯುವಕ ಸಂಘ ಹಾಗೂ ಭಜನಾ ಮಂದಿರದ ಸದಸ್ಯರ ಸಹಕಾರದಿಂದ ಭಜನಾ ಮಂದಿರದ ಸಭಾ ಭವನಕ್ಕೆ ಸಾಗಿಸಲಾಯಿತು.

ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ರತ್ನಾಕರ್, ಸದಸ್ಯ ಲಕ್ಷ್ಮೀನಾರಾಯಣ ಹೆಗ್ಡೆ ನಿನ್ಯಾಲು ಹಾಗೂ ಅಂಗನವಾಡಿ ಶಿಕ್ಷಕಿಯವರ ಕೋರಿಕೆಗೆ ಶ್ರೀ ರಾಮ ಭಜನಾ ಮಂದಿರದವರು ತಕ್ಷಣ ಸ್ಪಂದನೆ ನೀಡಿದ್ದಾರೆ.

ನೈನಾಡು ಪರಿಸರದಲ್ಲಿ ಬಹಳಷ್ಟು ವರ್ಷಗಳಿಂದ ಅಂಗನವಾಡಿ ಕಾರ್ಯ ನಿರ್ವಹಿಸುತ್ತಿದ್ದು ಸದರಿ ಅಂಗನವಾಡಿಗೆ ನೂತನ ಕಟ್ಟಡವು ಮಂಜೂರಾಗಿದ್ದು ಹತ್ತಿರದ ಶ್ರೀರಾಮ ಯುವಕ ಸಂಘಕ್ಕೆಂದು ಕಾದಿರಿಸಲಾದ ಸ್ಥಳದಲ್ಲಿ ನಿರ್ಮಾಣ ಮಾಡಲಾಗಿದೆ.
ನೂತನ ಕಟ್ಟಡವು ಭಾಗಶಃ ಪೂರ್ಣಗೊಂಡಿದ್ದು, ನೆಲಹಾಸು, ಕಿಟಕಿ ಬಾಗಿಲು, ವಿದ್ಯುತ್ ಸಂಪರ್ಕಗಳು ಇನ್ನಷ್ಟೇ ಆಗಬೇಕಿದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಿ ನೂತನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ತ್ವರಿತವಾಗಿ ಸಾಗುವಂತೆ ಮಾಡಬೇಕೆಂದು ಊರವರ ಒಕ್ಕೊರಲಿನ ಮನವಿ. ಈ ಬಗ್ಗೆ ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಗುತ್ತಿಗೆದಾರರಲ್ಲಿ ಮಾತುಕತೆ ನಡೆದಿದ್ದು ಅನುದಾನದ ಕೊರತೆಯಿದೆ ಎಂಬುದಾಗಿ ತಿಳಿಸಿದ್ದಾರೆ. ವಿಪತ್ತು ನಿರ್ವಹಣಾ ಯೋಜನೆಯಡಿಯಲ್ಲಿ ತುರ್ತಾಗಿ ನೂತನ ಕಟ್ಟಡದ ಬಾಕಿ ಉಳಿದಿರುವ ಕಾಮಗಾರಿ ಮುಗಿಸಲು ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸಬೇಕಾಗಿದೆ.

Related posts

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya
error: Content is protected !!