ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು.
ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಮತ್ತು ಜಗನ್ನಾಥ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ನೇತ್ರ ಬಿ., ವಕೀಲರಾದ ಶೈಲೇಶ್ ಆರ್. ಠೋಸರ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಕೀಲ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮಾತೃ ವೃಂದ ಶಿಶುಪಾಲನ ಕೇಂದ್ರದ ಸಂಚಾಲಕಿ ಮಮತಾ ಪ್ರಭಾಕರ್ ಪ್ರಾರ್ಥಿಸಿದರು. ವಕೀಲರಾದ ಪ್ರಿಯಾಂಕ ಶಿವನ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.
