ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಜೂ.2ರಂದು ನಡೆಯಿತು.
ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಬರಮಾಡಿಕೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ, ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು.