37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಜೂ.2ರಂದು ನಡೆಯಿತು.

ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಬರಮಾಡಿಕೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ, ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು.

Related posts

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya
error: Content is protected !!