September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಜೂ.2ರಂದು ನಡೆಯಿತು.

ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಬರಮಾಡಿಕೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ, ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು.

Related posts

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya
error: Content is protected !!