23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

ಮೊಗ್ರು: ಅಲೆಕ್ಕಿ-ಮುಗೇರಡ್ಕ-ಮೊಗ್ರು ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ, ಮಕ್ಕಳ ಹೊರಾಂಗಣ ಆಟಿಕೆ ಮೈದಾನ, ರಾಷ್ಟ್ರಧ್ವಜ ಸ್ತಂಭ, ಭಗವಧ್ವಜ ಕಂಬ, ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಉದ್ಘಾಟನೆ ಹಾಗೂ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಿ ಧ್ವಜ ಕಂಬ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಮಕ್ಕಳ ಹೊರಾಂಗಣ ಆಟಿಕೆ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಲೋಕಾರ್ಪಣೆಗೊಳಿಸಿದರು.

ಉದಯ ಭಟ್ ಕೊಳಬ್ಬೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವೆಂಕಟರಮಣ ಭಟ್, ಪುತ್ತೂರು ಕಬಕ ಪುರೋಹಿತ ದೇವರಾತ ಭಟ್, ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯಗುತ್ತು, ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಗಂಗಾಧರ ಪೂಜಾರಿ, ಬಂದಾರು ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕ ವೃಂದ, ಟ್ರಸ್ಟ್ ಪದಾಧಿಕಾರಿಗಳು ಹಾಗೂ ಮಾತೃ ಮಂಡಳಿ, ಮಾತಾಜಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭರತೇಶ್ ಪುಣ್ಕೆದಡಿ ಸ್ವಾಗತಿಸಿ, ಮಾತಾಜಿ ಪುಷ್ಪಲತಾ ನಿರೂಪಿಸಿ, ಉದಯ ಭಟ್ ಕೊಳಬ್ಬೆ ಧನ್ಯವಾದವಿತ್ತರು.

Related posts

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya
error: Content is protected !!