22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

ಮೊಗ್ರು: ಅಲೆಕ್ಕಿ-ಮುಗೇರಡ್ಕ-ಮೊಗ್ರು ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ, ಮಕ್ಕಳ ಹೊರಾಂಗಣ ಆಟಿಕೆ ಮೈದಾನ, ರಾಷ್ಟ್ರಧ್ವಜ ಸ್ತಂಭ, ಭಗವಧ್ವಜ ಕಂಬ, ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಉದ್ಘಾಟನೆ ಹಾಗೂ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡಿ ಧ್ವಜ ಕಂಬ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಮಕ್ಕಳ ಹೊರಾಂಗಣ ಆಟಿಕೆ ಉದ್ಘಾಟಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್ ಲೋಕಾರ್ಪಣೆಗೊಳಿಸಿದರು.

ಉದಯ ಭಟ್ ಕೊಳಬ್ಬೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ವೆಂಕಟರಮಣ ಭಟ್, ಪುತ್ತೂರು ಕಬಕ ಪುರೋಹಿತ ದೇವರಾತ ಭಟ್, ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯಗುತ್ತು, ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಗಂಗಾಧರ ಪೂಜಾರಿ, ಬಂದಾರು ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕ ವೃಂದ, ಟ್ರಸ್ಟ್ ಪದಾಧಿಕಾರಿಗಳು ಹಾಗೂ ಮಾತೃ ಮಂಡಳಿ, ಮಾತಾಜಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಭರತೇಶ್ ಪುಣ್ಕೆದಡಿ ಸ್ವಾಗತಿಸಿ, ಮಾತಾಜಿ ಪುಷ್ಪಲತಾ ನಿರೂಪಿಸಿ, ಉದಯ ಭಟ್ ಕೊಳಬ್ಬೆ ಧನ್ಯವಾದವಿತ್ತರು.

Related posts

ರಾಜ್ಯದ ಅಡಿಕೆ ಲಾರಿಗಳು ಮಹಾರಾಷ್ಟ್ರದಲ್ಲಿ ಜಪ್ತಿ,ಕರಾವಳಿಯಲ್ಲಿ ಅಡಿಕೆ ಧಾರಣೆ ಕುಸಿತದ ಆತಂಕ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!