30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

ಗುರುವಾಯನಕೆರೆ: ವಿದ್ಯಾಭ್ಯಾಸದೊಂದಿಗೆ ಶ್ರಮ, ಶಿಸ್ತಿಗೆ ಆದ್ಯತೆ ನೀಡಿ ಉನ್ನತ ವ್ಯಕ್ತಿತ್ವವನ್ನು ಹೊಂದುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ‘ವಿದ್ಯಾಪ್ರವೇಶಂ’ ಓರಿಯೆಂಟೆಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಅನಗತ್ಯ ವ್ಯಾಮೋಹಗಳಿಗೆ, ದುಶ್ಚಟಗಳಿಗೆ ಒಳಗಾಗದೆ ಇತರರಿಗೆ ಮಾದರಿಯಾಗಿ ಉನ್ನತ ಸ್ಥಾನವನ್ನು ಗಳಿಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ಸೌಮ್ಯ ಬಿ. ಧನ್ಯವಾದ ಸಲ್ಲಿಸಿದರು. ಶ್ರೀಮತಿ ಅನುರಾಧ ಕೆ ರಾವ್ ಕಾರ್ಯಕ್ರಮ ನಿರೂಪಿಸಿದರು.

ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀಮತಿ ರಾಧಿಕಾ, ಶ್ರೀಮತಿ ವಿನಯ ಭಿಡೆ, ಶ್ರೀಮತಿ ಸೌಮ್ಯ ಬಿ, ಶ್ರೀಮತಿ ಅನುಷಾ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ನಡೆಸಿಕೊಟ್ಟರು.ಉಪನ್ಯಾಸಕ ಹರ್ಷಿತ್ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.ಉಪನ್ಯಾಸಕರಾದ ಸುಧೀರ್ ಕೆ ಎನ್ ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು.

Related posts

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

Suddi Udaya
error: Content is protected !!