25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಜರುಗಿತು.ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ತಿಂಡಿ ನೀಡಲಾಯಿತು‌.

ಕುವೆಟ್ಟು ಗ್ರಾ.ಪಂ. ಸದಸ್ಯ ಸಿಲ್ವೆಸ್ಟರ್ ಮೋನಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ.ಪಂ. ಸದಸ್ಯೆ ಅಮೀನಾ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ಶಾಲಾ ಶಿಕ್ಷಕಿ ಶಶಿಕಲಾ ನಿರೂಪಿಸಿ, ಶಿಕ್ಷಕ ಕಿರಣ್ ಎಸ್.ಪಿ ವಂದಿಸಿದರು. ಶಿಕ್ಷಣ ಇಲಾಖೆಯಿಂದ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

Related posts

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya
error: Content is protected !!