25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯು ಜೂ.2ರಂದು ಕಾಲೇಜಿನ ಆಡಿಟೋರಿಯಮ್‌ನಲ್ಲಿ ಜರಗಿತು.

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ. ಫಾ. ಅಬೆಲ್ ಲೋಬೋ ದೀಪ ಬೆಳಗಿಸಿ ಉದ್ಘಾಟಿಸಿ ಶಿಕ್ಷಣದ ಜೊತೆಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತವರಣ ಕಾಲೇಜಿನಲ್ಲಿ ಲಭಿಸುತ್ತದೆ. ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ವಂ.ಫಾ. ವಿಜಯ್ ಲೋಬೋ ಕಾಲೇಜಿನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳು ಹಾಗು ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ನೈತಿಕ ಹಾಗೂ ಮಾಲ್ಯಾಧರಿತ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣಗೊಳಿಸುತ್ತದೆ ಎಂದು ಹೇಳಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿಗೆ ದಾಖಲಾತಿ ಪಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya
error: Content is protected !!