September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!