23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya
error: Content is protected !!