22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

ಉಜಿರೆ: ಉಜಿರೆ-ಬೆಳಾಲು-ಪೆರ್ಲ ಬೈಪಾಡಿ ಮೂಲಕ ಕೊಯ್ಯೂರು ಆದೂರ್ ಪೆರಾಲ್‌ಗೆ ಸಂಚಾರಿಸುವ ಕೆಎಸ್‌ಆರ್‌ಟಿಸಿ ಬಸ್‌ನ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಬಸ್ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬಸ್ ಚಾಲಕ ಲೋಕೇಶ್ ಮತ್ತು ನಿರ್ವಾಹಕ ಕುಮಾರ್ ರವರನ್ನು ಅಭಿನಂದಿಸಲಾಯಿತು.
ಉಜಿರೆ, ಬೆಳಾಲು, ಪೆರ್ಲ ಬೈಪಾಡಿ, ಬಂದಾರು ಕಡೆಯಿಂದ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮತ್ತು ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳಿಗೆ ದಾಖಲಾತಿ ಹೊಂದುವ ವಿದ್ಯಾರ್ಥಿಗಳಿಗೆ ಈ ಬಸ್ ರೂಟ್ ಪ್ರಯೋಜನಕಾರಿಯಾಗಲಿದೆ. ಸಾರ್ವಜನಿಕರು ಕೂಡಾ ಈ ಬಸ್ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂರು ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್, ಕಾಲೇಜು ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ದಿವಾ ಕೊಕ್ಕಡ ವಂದಿಸಿದರು.
ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಡಿಪ್ಪೋ ಮ್ಯಾನೇಜರ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

Related posts

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!