ಉಜಿರೆ: ಉಜಿರೆ-ಬೆಳಾಲು-ಪೆರ್ಲ ಬೈಪಾಡಿ ಮೂಲಕ ಕೊಯ್ಯೂರು ಆದೂರ್ ಪೆರಾಲ್ಗೆ ಸಂಚಾರಿಸುವ ಕೆಎಸ್ಆರ್ಟಿಸಿ ಬಸ್ನ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.
ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಬಸ್ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಸ್ ಚಾಲಕ ಲೋಕೇಶ್ ಮತ್ತು ನಿರ್ವಾಹಕ ಕುಮಾರ್ ರವರನ್ನು ಅಭಿನಂದಿಸಲಾಯಿತು.
ಉಜಿರೆ, ಬೆಳಾಲು, ಪೆರ್ಲ ಬೈಪಾಡಿ, ಬಂದಾರು ಕಡೆಯಿಂದ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮತ್ತು ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳಿಗೆ ದಾಖಲಾತಿ ಹೊಂದುವ ವಿದ್ಯಾರ್ಥಿಗಳಿಗೆ ಈ ಬಸ್ ರೂಟ್ ಪ್ರಯೋಜನಕಾರಿಯಾಗಲಿದೆ. ಸಾರ್ವಜನಿಕರು ಕೂಡಾ ಈ ಬಸ್ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂರು ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್, ಕಾಲೇಜು ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ದಿವಾ ಕೊಕ್ಕಡ ವಂದಿಸಿದರು.
ಧರ್ಮಸ್ಥಳ ಕೆಎಸ್ಆರ್ಟಿಸಿ ಡಿಪ್ಪೋ ಮ್ಯಾನೇಜರ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.