22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

ಉಜಿರೆ: ಉಜಿರೆ-ಬೆಳಾಲು-ಪೆರ್ಲ ಬೈಪಾಡಿ ಮೂಲಕ ಕೊಯ್ಯೂರು ಆದೂರ್ ಪೆರಾಲ್‌ಗೆ ಸಂಚಾರಿಸುವ ಕೆಎಸ್‌ಆರ್‌ಟಿಸಿ ಬಸ್‌ನ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಬಸ್ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬಸ್ ಚಾಲಕ ಲೋಕೇಶ್ ಮತ್ತು ನಿರ್ವಾಹಕ ಕುಮಾರ್ ರವರನ್ನು ಅಭಿನಂದಿಸಲಾಯಿತು.
ಉಜಿರೆ, ಬೆಳಾಲು, ಪೆರ್ಲ ಬೈಪಾಡಿ, ಬಂದಾರು ಕಡೆಯಿಂದ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಮತ್ತು ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳಿಗೆ ದಾಖಲಾತಿ ಹೊಂದುವ ವಿದ್ಯಾರ್ಥಿಗಳಿಗೆ ಈ ಬಸ್ ರೂಟ್ ಪ್ರಯೋಜನಕಾರಿಯಾಗಲಿದೆ. ಸಾರ್ವಜನಿಕರು ಕೂಡಾ ಈ ಬಸ್ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂರು ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್, ಕಾಲೇಜು ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ದಿವಾ ಕೊಕ್ಕಡ ವಂದಿಸಿದರು.
ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಡಿಪ್ಪೋ ಮ್ಯಾನೇಜರ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

Related posts

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya
error: Content is protected !!