23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya
error: Content is protected !!