22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!