September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ.

ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.

ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್. ಬಿ ಯವರು ಅಭಿನಂದಿಸಿದರು.

Related posts

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
error: Content is protected !!