23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ನೋಬರ್ಟ್ ಮಾರ್ಟಿಸ್ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಮೇ 31ರಂದು ನಡೆಯಿತು.

ಅಂಡಿಂಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮೋಹನ ಅಂಡಿಂಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರಾಂಶುಪಾಲರ ಉತ್ತಮ ವ್ಯಕ್ತಿತ್ವವನ್ನು, ಕಾಲೇಜಿನಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ ಭಟ್, ಸರ್ಕಾರಿ ಪದವಿಪೂರ್ವ ಕಾಲೇಜು ಅಳದಂಗಡಿಯ ಪ್ರಾಂಶುಪಾಲ ಸನ್ನಿ, ನಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಮುನಿಯಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಜಯಶ್ರೀ, ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯ ಮುಖ್ಯೋಪಾಧ್ಯಾಯ ಮಹಮ್ಮದ್ ರಿಯಾಜ್ ಮತ್ತು ಇತರ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಂಶುಪಾಲರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಊರಿನ ಗಣ್ಯರು, ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಪ್ರಾಂಶುಪಾಲರು ಕಾಲೇಜಿಗೆ ನೀಡಿದ ಸೇವೆಯನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಉಪನ್ಯಾಸಕರಾದ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸುಷ್ಮಾ ವಂದಿಸಿದರು.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
error: Content is protected !!